ಗುಂಡ ಶಿಕ್ಷಣಮಂತ್ರಿಯಾದ. 'ಶಿಕ್ಷಕರಿದ್ದರೆ ಮಾತ್ರ ಗುಣಾತ್ಮಕ ಶಿಕ್ಷಣ' ಎನ್ನುತ್ತಾ ಒಂದು ಲಕ್ಷ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದ. ತರಬೇತಿ ಪಡೆದು ಸರ್ಟಿಫಿಕೇಟುಗಳನ್ನು ಎಲ್ಲೆಲ್ಲೋ ಎಸೆದು ಬೇರೆ ಬೇರೆ ವೃತ್ತಿಗ ಳಲ್ಲಿ ತೊಡಗಿದವರೆಲ್ಲರೂ ಹೇಗೋ ಎಲ್ಲೋ ಹುಡುಕಿ ಅರ್ಜಿ ಸಲ್ಲಿಸಿದರು.ಹಲವರು ಪುಸ್ತಕ ಓದುವುದನ್ನೇ ನಿಲ್ಲಿಸಿ ಬಿಟ್ಟಿದ್ದರು. ಎಷ್ಟೋ ಮಂದಿಗೆ ಕಾಗುಣಿತವೇ ಮರೆತುಹೋಗಿತ್ತು.
ಅವರೆಲ್ಲರೂ ಮೇಷ್ಟ್ರಾದರು.
'ಗುಣಾತ್ಮಕ ಶಿಕ್ಷಣ ನಮ್ಮ ನಡೆ' ಎಂದು ಗುಂಡ ತನ್ನ ಕಾರಿನಲ್ಲಿ ಬರೆಸಿಕೊಂಡ.
*
✍️ ಕಾಜೂರು ಸತೀಶ್
No comments:
Post a Comment